ಮೈಸೂರು ನಗರದ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಭೇಟಿ ನೀಡಿದರು. ಅವರು ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಧ್ಯಕ್ಷರಾದ ಬಳಿಕ ಇದು ಅವರ ಮೊದಲ ಧಾರ್ಮಿಕ ಬೇಟಿಯಾಗಿದ್ದು, ದೇವಿಯ ಆಶೀರ್ವಾದವನ್ನು ಪಡೆದು ರಾಜ್ಯ ಕ್ರಿಕೆಟ್ ಅಭಿವೃದ್ಧಿಗೆ ಪ್ರಾರ್ಥನೆ ಸಲ್ಲಿಸಿದರು. ಸ್ಥಳೀಯರು ಹಾಗೂ ಅಭಿಮಾನಿಗಳು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ವೆಂಕಟೇಶ್ ಪ್ರಸಾದ್ ಅವರು ಕ್ರಿಕೆಟ್ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಂತರ ಇದೀಗ KSCA ಅಧ್ಯಕ್ಷರಾಗಿ ಹೊಸ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಈ ಬೇಟಿ ಅವರ ಹೊಸ ಹುದ್ದೆಯ ಸಂಕೇತವಾಗಿ ಮಹತ್ವ ಪಡೆದಿದೆ. ಚಾಮುಂಡಿ ಬೆಟ್ಟದ ನಂತರ ಅವರು ನಂಜನಗೂಡು ಪಟ್ಟಣದ ಪ್ರಸಿದ್ಧ ನಂಜುಂಡೇಶ್ವರ ದೇವಾಲಯಕ್ಕೂ ಭೇಟಿ ನೀಡಿದರು. ಅಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂಜುಂಡೇಶ್ವರ ದೇವಾಲಯವು ಕರ್ನಾಟಕದ ಪ್ರಮುಖ ಧಾರ್ಮಿಕ ಕೇಂದ್ರವಾಗಿದ್ದು, ಪ್ರಸಾದ್ ಅವರ ಬೇಟಿ ಸ್ಥಳೀಯ ಭಕ್ತರಲ್ಲಿ ಸಂತೋಷ ಮೂಡಿಸಿದೆ.
ಮಾಜಿ ಕ್ರಿಕೆಟಿಗನಾದ ವೆಂಕಟೇಶ್ ಪ್ರಸಾದ್ ಅವರು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿರುವುದು ಅಭಿಮಾನಿಗಳಲ್ಲಿ ಸಂತೋಷ ಮೂಡಿಸಿದ್ದು, ಕ್ರಿಕೆಟ್ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ ಧಾರ್ಮಿಕ ನಂಬಿಕೆಗಳನ್ನು ಪಾಲಿಸುತ್ತಿರುವುದು ಜನರಲ್ಲಿ ಗೌರವವನ್ನು ಹೆಚ್ಚಿಸಿದೆ. ಒಟ್ಟಾರೆ, ಮೈಸೂರು ಚಾಮುಂಡಿ ಬೆಟ್ಟ ಹಾಗೂ ನಂಜನಗೂಡು ನಂಜುಂಡೇಶ್ವರ ದೇವಾಲಯಕ್ಕೆ ವೆಂಕಟೇಶ್ ಪ್ರಸಾದ್ ಅವರ ಬೇಟಿ ಧಾರ್ಮಿಕ ಹಾಗೂ ಸಾಮಾಜಿಕವಾಗಿ ಮಹತ್ವ ಪಡೆದಿದೆ. KSCA ಅಧ್ಯಕ್ಷರಾಗಿ ಹೊಸ ಜವಾಬ್ದಾರಿಯನ್ನು ಸ್ವೀಕರಿಸಿದ ಬಳಿಕ ಅವರ ಈ ಧಾರ್ಮಿಕ ಪ್ರವಾಸವು ರಾಜ್ಯ ಕ್ರಿಕೆಟ್ ಅಭಿವೃದ್ದಿಗೆ ದೇವರ ಆಶೀರ್ವಾದ ಪಡೆಯುವ ಸಂಕೇತವಾಗಿ ಕಾಣಿಸಿಕೊಂಡಿದೆ.