Jan 24, 2026 Languages : ಕನ್ನಡ | English

ಚಂದಾಪುರ ಟ್ರಾಫಿಕ್ ಜಾಮ್ – ನಡುರಸ್ತೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಾರು ಚಾಲಕ

ಚಂದಾಪುರದಿಂದ ಅತ್ತಿಬೆಲೆ ಮಾರ್ಗದಲ್ಲಿ ನಡೆದಿರುವ ಟ್ರಾಫಿಕ್ ಜಾಮ್ ಒಂದು ವಿಚಿತ್ರ ಘಟನೆಗೆ ಕಾರಣವಾಯಿತು. ಗಂಟೆಗಟ್ಟಲೇ ವಾಹನಗಳು ಪ್ಲೈಓವರ್ ಮೇಲೆ ಸಿಲುಕಿಕೊಂಡಿದ್ದರಿಂದ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಬ್ಬ ವ್ಯಕ್ತಿ ತಾಳ್ಮೆ ಕಳೆದುಕೊಂಡು ನಡುರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡಿದ ಘಟನೆ ಜನರಲ್ಲಿ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ಟ್ರಾಫಿಕ್ ಸಮಸ್ಯೆ – ಚಂದಾಪುರ ಘಟನೆ ಜನರಲ್ಲಿ ಆಕ್ರೋಶ
ಬೆಂಗಳೂರು ಟ್ರಾಫಿಕ್ ಸಮಸ್ಯೆ – ಚಂದಾಪುರ ಘಟನೆ ಜನರಲ್ಲಿ ಆಕ್ರೋಶ

ಕಾರಿನಲ್ಲಿದ್ದ ವ್ಯಕ್ತಿ, ಎರಡು ಡೋರ್‌ಗಳನ್ನು ತೆರೆಯುವ ಮೂಲಕ ಮಧ್ಯದಲ್ಲಿ ನಿಂತು ಮೂತ್ರ ವಿಸರ್ಜನೆ ಮಾಡಿದ ದೃಶ್ಯವನ್ನು ಅಲ್ಲಿ ಹಾದುಹೋಗುತ್ತಿದ್ದವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಕ್ಷಣಾರ್ಧದಲ್ಲಿ ವೈರಲ್ ಆಗಿ, ಟ್ರಾಫಿಕ್ ಸಮಸ್ಯೆಗಳ ಗಂಭೀರತೆಯನ್ನು ಮತ್ತೊಮ್ಮೆ ನೆನಪಿಸಿದೆ.

ಚಂದಾಪುರದಿಂದ ಅತ್ತಿಬೆಲೆ ಮಾರ್ಗದಲ್ಲಿ ಪ್ರತಿದಿನವೂ ಟ್ರಾಫಿಕ್ ಜಾಮ್ ಸಾಮಾನ್ಯ. ಆದರೆ ಈ ಬಾರಿ ವಿಪರೀತ ಟ್ರಾಫಿಕ್‌ನಿಂದಾಗಿ ಕಾರು ಚಾಲಕ ತಾಳ್ಮೆ ಕಳೆದುಕೊಂಡು ಇಂತಹ ಕ್ರಮಕ್ಕೆ ಮುಂದಾಗಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ. ಕೆಲವರು ಇದನ್ನು ಅಸಹಜ ವರ್ತನೆ ಎಂದು ಟೀಕಿಸಿದರೆ, ಇನ್ನೂ ಕೆಲವರು “ಟ್ರಾಫಿಕ್ ಸಮಸ್ಯೆ ಇಷ್ಟು ಗಂಭೀರವಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ. ಈ ಘಟನೆ ಸಾರ್ವಜನಿಕ ಸ್ಥಳಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯನ್ನೂ ತೋರಿಸುತ್ತದೆ. ದೀರ್ಘಕಾಲ ಟ್ರಾಫಿಕ್‌ನಲ್ಲಿ ಸಿಲುಕಿದಾಗ ಪ್ರಯಾಣಿಕರಿಗೆ ಶೌಚಾಲಯ ಸೌಲಭ್ಯಗಳ ಕೊರತೆ ತೀವ್ರ ಸಮಸ್ಯೆಯಾಗುತ್ತದೆ. ನಗರಾಭಿವೃದ್ಧಿ ಮತ್ತು ಟ್ರಾಫಿಕ್ ನಿರ್ವಹಣೆಯಲ್ಲಿ ಇಂತಹ ಅಂಶಗಳಿಗೂ ಗಮನ ಹರಿಸಬೇಕಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ವೈರಲ್ ಆಗಿರುವ ಈ ವಿಡಿಯೋ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಜನರಲ್ಲಿ ಮತ್ತೊಮ್ಮೆ ಚರ್ಚೆ ಹುಟ್ಟು ಹಾಕಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂಬ ಒತ್ತಾಯ ಹೆಚ್ಚಾಗಿದೆ. ಒಟ್ಟಾರೆ ಹೇಳಬೇಕು ಅಂದರೆ, ಈ ಘಟನೆ ಟ್ರಾಫಿಕ್ ಜಾಮ್‌ನಿಂದ ಜನರು ಎದುರಿಸುವ ಅಸಹಾಯಕ ಪರಿಸ್ಥಿತಿಯ ನೈಜ ಚಿತ್ರಣವಾಗಿ ಪರಿಣಮಿಸಿದೆ. 

Latest News