ಕೊನೆಗೂ ಮಣಿದ ಕೇಂದ್ರ ಸರ್ಕಾರ - ಪ್ರತಿಭಟನಾಕಾರರ ಬೇಡಿಕೆ ಪತ್ರ ಸ್ವೀಕರಿಸಿದ ಸಚಿವ ಜೆ.ಪಿ. ನಡ್ಡಾ!!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ‘ನೀಟ್ ಯುಜಿ’ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಹಗರಣದ ಕಿಚ್ಚು ಈಗ ಸಂಸತ್ತಿನ ಹೊಸ್ತಿಲಿಗೆ ಬಂದು ತಲುಪಿದೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದ ಇಂದೇ, ದೆಹಲಿಯ ಜಂತರ್ ಮಂತರ್‌ನಲ್ಲಿ ಸಾವಿರಾರು ಯುವಕ-ಯುವತಿಯರು ಒಟ್ಟಾಗಿ ‘ಚಲೋ ಸಂಸದ್’ (Chalo Sansad) ಬೃಹತ್ ರ್ಯಾಲಿಯ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯು ಇಡೀ ದೇಶದ ಗಮನ ಸೆಳೆದಿದ್ದು, ಕೇಂದ್ರ ಸರ್ಕಾರವನ್ನು ರಕ್ಷಣಾತ್ಮಕ ಸ್ಥಾನಕ್ಕೆ ತಂದು ನಿಲ್ಲಿಸಿದೆ.

ಕೊನೆಗೂ ಮಣಿದ ಕೇಂದ್ರ ಸರ್ಕಾರ | Photo Credit: https://x.com/PTI_News
ಕೊನೆಗೂ ಮಣಿದ ಕೇಂದ್ರ ಸರ್ಕಾರ | Photo Credit: https://x.com/PTI_News

ಪ್ರತಿಭಟನೆಯ ತೀವ್ರತೆಗೆ ಮಣಿದಿರುವ ಕೇಂದ್ರ ಸರ್ಕಾರ, ಕೊನೆಗೂ ಪ್ರತಿಭಟನಾಕಾರರ ನಿಯೋಗದೊಂದಿಗೆ ಮಾತುಕತೆ ನಡೆಸಿ ಅವರ ಅಧಿಕೃತ ಬೇಡಿಕೆಗಳ ಪತ್ರವನ್ನು ಸ್ವೀಕರಿಸಿದೆ. ತೀವ್ರ ರಾಜಕೀಯ ಹಾಗೂ ಸಾಮಾಜಿಕ ಸಂಘರ್ಷಕ್ಕೆ ಕಾರಣವಾಗಿರುವ ಈ ಘಟನೆಯ ಸಂಪೂರ್ಣ ವಿವರ ಇಲ್ಲಿದೆ.

ದೆಹಲಿಯಲ್ಲಿ ಬಿಗಿ ಪೊಲೀಸ್ ಭದ್ರತೆ

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ದೇಶದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಹಸ್ರಾರು ವಿದ್ಯಾರ್ಥಿಗಳು, ಯುವ ಸಂಘಟನೆಗಳು ಮತ್ತು ಶಿಕ್ಷಣ ಪ್ರೇಮಿಗಳು ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದರು. ಅಲ್ಲಿಂದ ಸಂಸತ್ ಭವನದ ಕಡೆಗೆ ಮುನ್ನುಗ್ಗಲು ‘ಚಲೋ ಸಂಸದ್’ ಹಮ್ಮಿಕೊಂಡಿದ್ದರಿಂದ ಇಡೀ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ಬ್ಯಾರಿಕೇಡ್‌ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಬೃಹತ್ ಪ್ರಮಾಣದಲ್ಲಿ ನಿಯೋಜಿಸಲಾಗಿತ್ತು. ಇಡೀ ರಾಜಧಾನಿ ಬಿಗಿ ಪೊಲೀಸ್ ಕಾವಲಿನಲ್ಲಿತ್ತು.

ಕೇಂದ್ರ ಸಚಿವರ ಮಹತ್ವದ ಸಭೆಗಳ ಸರಣಿ

ರಾಜಧಾನಿಯ ರಸ್ತೆಗಳಲ್ಲಿ ವಿದ್ಯಾರ್ಥಿಗಳ ಆಕ್ರೋಶ ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಸರ್ಕಾರದ ಉನ್ನತ ಮಟ್ಟದಲ್ಲಿ ತಲ್ಲಣಗಳು ಆರಂಭವಾದವು.

ಅಮಿತ್ ಶಾ - ಧರ್ಮೇಂದ್ರ ಪ್ರಧಾನ್ ಭೇಟಿ: ಒಂದು ಕಡೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ದಾವಿಸಿ, ಸುಮಾರು ಮೂರೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಸಿದರು. ಪರಿಸ್ಥಿತಿಯನ್ನು ನಿಯಂತ್ರಿಸುವ ಮತ್ತು ಕಾಯ್ದೆ ಸುವ್ಯವಸ್ಥೆ ಕಾಪಾಡುವ ಬಗ್ಗೆ ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಜೆ.ಪಿ. ನಡ್ಡಾ ಅವರೊಂದಿಗೆ ಮಾತುಕತೆ: ಇನ್ನೊಂದೆಡೆ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಪ್ರತಿಭಟನಾಕಾರರ ಪರವಾಗಿ ಸಿಜೆಪಿ ನಾಯಕರು ಸಭೆ ನಡೆಸಿದರು.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅಭಿಜೀತ್ ದಿಪ್ಕೆ

ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿದ ನಂತರ, ಜುಲೈ 18 ರಿಂದ ಸಿಜೆಪಿ (CJP) ಸ್ಥಾಪಕ ಅಭಿಜೀತ್ ದಿಪ್ಕೆ ಅವರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು.

ಆದರೆ, ನೀಟ್ ಪರೀಕ್ಷೆಯ ಹಗರಣ ಮತ್ತು ಮಾನಸಿಕ ಒತ್ತಡಕ್ಕೆ ಸಿಲುಕಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೀಟ್ ವಿದ್ಯಾರ್ಥಿಯೊಬ್ಬರ ತಂದೆ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ವಿನಂತಿ ಮಾಡಿಕೊಂಡರು. ಮೃತ ವಿದ್ಯಾರ್ಥಿಯ ತಂದೆಯ ಭಾವುಕ ಮಧ್ಯಸ್ಥಿಕೆ ಹಾಗೂ ಆಸ್ಪತ್ರೆಯಲ್ಲೇ ಇರುವ ಸೋನಮ್ ವಾಂಗ್ಚುಕ್ ಅವರ ಸಂದೇಶದ ಹಿನ್ನೆಲೆಯಲ್ಲಿ, ಅಭಿಜೀತ್ ದಿಪ್ಕೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು. "ನನ್ನ ಉಪವಾಸ ಅಂತ್ಯವಾಗಿರಬಹುದು, ಆದರೆ ದೇಶದ ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ಮತ್ತು ವಿದ್ಯಾರ್ಥಿಗಳ ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ" ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಸಿಜೆಪಿಯ 3 ಪ್ರಮುಖ ಬೇಡಿಕೆಗಳು

ಸಿಜೆಪಿ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಸುಮಾರು 10 ನಿಮಿಷಗಳ ಕಾಲ ಭೇಟಿಯಾಗಿ, ಪ್ರತಿಭಟನಾಕಾರರ ಪರವಾಗಿ 3 ಪ್ರಮುಖ ಬೇಡಿಕೆಗಳನ್ನೊಳಗೊಂಡ ಲಿಖಿತ ಪತ್ರವನ್ನು ಹಸ್ತಾಂತರಿಸಿದರು. ಆ ಬೇಡಿಕೆಗಳು ಈ ಕೆಳಗಿನಂತಿವೆ:

ಶಿಕ್ಷಣ ಸಚಿವರ ರಾಜೀನಾಮೆ: ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ ನೀಟ್ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಸೋನಮ್ ವಾಂಗ್ಚುಕ್ ಅವರಿಗೆ ಮುಕ್ತಾವಕಾಶ: ಸಫ್ದರ್ಜಂಗ್ ಆಸ್ಪತ್ರೆಯಲ್ಲಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರಿಗೆ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿಗೆ ಆಗಮಿಸಲು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲು ಸರ್ಕಾರ ತಕ್ಷಣ ಅನುಮತಿ ನೀಡಬೇಕು.

ಮೃ*ತರ ಕುಟುಂಬಗಳಿಗೆ ಪರಿಹಾರ: ನೀಟ್ ಪರೀಕ್ಷೆಯ ಹಗರಣ, ಗೊಂದಲ ಮತ್ತು ಮಾನಸಿಕ ಒತ್ತಡ ತಾಳಲಾರದೆ ದೇಶದ ವಿವಿಧೆಡೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 1 ಕೋಟಿ ರೂ. ಪರಿಹಾರ ಧನ ನೀಡಬೇಕು.

ಸೌಹಾರ್ದಯುತ ವಾತಾವರಣದಲ್ಲಿ ಮಾತುಕತೆ

ಪ್ರತಿಭಟನಾಕಾರರೊಂದಿಗೆ ನಡೆದ ಮಾತುಕತೆಯ ಕುರಿತು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಸಾಮಾಜಿಕ ಜಾಲತಾಣ 'ಎಕ್ಸ್' (ಟ್ವಿಟರ್) ನಲ್ಲಿ ಸರಣಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸರ್ಕಾರದ ಕಡೆಯಿಂದ ಮಾತುಕತೆಯ ಪ್ರಕ್ರಿಯೆ ಹೇಗೆ ನಡೆಯಿತು ಎಂಬುದನ್ನು ಅವರು ಹಂತ ಹಂತವಾಗಿ ವಿವರಿಸಿದ್ದಾರೆ.

"ಇಂದು ಬೆಳಿಗ್ಗೆಯಿಂದಲೇ ಆರಂಭವಾದ ಚರ್ಚೆಯು ಸತತ ಹಲವು ಗಂಟೆಗಳ ಕಾಲ ಮುಂದುವರಿದಿತ್ತು. ಪ್ರತಿಭಟನಾಕಾರರ ಕಡೆಯಿಂದಲೇ ಇಂದು ಬೆಳಿಗ್ಗೆ ಮಾತುಕತೆಗಾಗಿ ಮೊದಲ ಪ್ರಸ್ತಾವನೆ ಬಂದಿತ್ತು. ಇಂದು ಬೆಳಿಗ್ಗೆ 11.50ಕ್ಕೆ ಆರಂಭಿಕ ಮೌಖಿಕ ಚರ್ಚೆಯೊಂದಿಗೆ ಮಾತುಕತೆ ಶುರುವಾಯಿತು. ನಂತರ ಪ್ರತಿಭಟನಾಕಾರರ ನಿಯೋಗದೊಂದಿಗೆ ಸುದೀರ್ಘ ಸಭೆ ನಡೆಯಿತು. ಇಂದು ಸಂಜೆ 4 ಗಂಟೆಗೆ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನೊಳಗೊಂಡ ಅಧಿಕೃತ ಲಿಖಿತ ಮನವಿ ಪತ್ರವನ್ನು ನನಗೆ ನೀಡಿದ್ದಾರೆ. ಒಟ್ಟಾರೆ ಸಭೆಯು ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆದಿದೆ."

ವ್ಯಂಗ್ಯಚಿತ್ರದಿಂದ ಬೃಹತ್ ಚಳವಳಿಯವರೆಗೆ

ಇಂದು ದೆಹಲಿಯನ್ನೇ ಬೆಚ್ಚಿಬೀಳಿಸಿದ ಈ 'ಕಾಕ್ರೋಚ್ ಜನತಾ ಪಾರ್ಟಿ' (CJP) ಆರಂಭದಲ್ಲಿ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ವ್ಯಂಗ್ಯಚಿತ್ರ (Political Satire) ಮತ್ತು ವಿಡಂಬನೆಗಾಗಿ ಸೃಷ್ಟಿಯಾದ ಒಂದು ಗುಂಪಾಗಿತ್ತು. ಆದರೆ ಇಂದು ಅದು ದೇಶದ ಯುವಕರ ಧ್ವನಿಯಾಗಿ ಮಾರ್ಪಟ್ಟಿದೆ.

ಇದರ ಸ್ಥಾಪಕ ಅಭಿಜೀತ್ ದಿಪ್ಕೆ ಅವರು ಅಮೆರಿಕದ ಪ್ರಸಿದ್ಧ ಬೋಸ್ಟನ್ ವಿಶ್ವವಿದ್ಯಾಲಯದ ಪಬ್ಲಿಕ್ ರಿಲೇಶನ್ಸ್ (PR) ಪದವೀಧರರಾಗಿದ್ದಾರೆ. ವಿಶೇಷವೆಂದರೆ, ಇವರು ಈ ಹಿಂದೆ ಆಮ್ ಆದ್ಮಿ ಪಾರ್ಟಿಯ (AAP) ಸೋಷಿಯಲ್ ಮೀಡಿಯಾ ತಂಡದಲ್ಲೂ ಪ್ರಮುಖವಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಡಿಜಿಟಲ್ ತಂತ್ರಜ್ಞಾನ ಮತ್ತು ಸಾರ್ವಜನಿಕ ಸಂಪರ್ಕದ ತಂತ್ರಗಳನ್ನು ಬಳಸಿಕೊಂಡು ಕೇವಲ ಸಾಮಾಜಿಕ ಜಾಲತಾಣದ ಗ್ರೂಪ್ ಆಗಿದ್ದ ಸಿಜೆಪಿಯನ್ನು, ಇಂದು ಸಂಸತ್ತನ್ನೇ ನಡುಗಿಸುವಂತಹ ಬೃಹತ್ ನೆಲದ ಚಳವಳಿಯಾಗಿ ರೂಪಿಸುವಲ್ಲಿ ಅಭಿಜೀತ್ ದಿಪ್ಕೆ

Latest News