Feb 16, 2026 Languages : ಕನ್ನಡ | English

ತಾಯಿ-ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ - ಬಿಪಿ ಶುಗರ್ ಪರೀಕ್ಷೆ ಮಾಡಿಸಿಕೊಂಡ ಡಿಕೆಶಿ ನಡೆಗೆ ಬಾರಿ ಮೆಚ್ಚುಗೆ!!

ರಾಮನಗರ: ಕನಕಪುರ ತಾಯಿ-ಮಕ್ಕಳ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಹೌದು, ಬೆಂಗಳೂರಿಗೆ ತೆರಳುವ ಮುನ್ನವೇ ಅವರು ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ಸೇವೆಗಳ ಗುಣಮಟ್ಟ, ಸೌಲಭ್ಯಗಳು ಹಾಗೂ ಆಡಳಿತಾತ್ಮಕ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಹೆರಿಗೆ ಘಟಕ, ಮಕ್ಕಳ ವಾರ್ಡ್, ಲಸಿಕಾ ವ್ಯವಸ್ಥೆ ಮತ್ತು ಔಷಧಿ ಲಭ್ಯತೆ ಕುರಿತು ಸಿಬ್ಬಂದಿಯಿಂದ ನೇರವಾಗಿ ಮಾಹಿತಿ ಸಂಗ್ರಹಿಸಿದರು.

ಆಸ್ಪತ್ರೆಯ ಆಡಳಿತಾತ್ಮಕ ಕಾರ್ಯವೈಖರಿ ಪರಿಶೀಲಿಸಿದ ಡಿ.ಕೆ. ಶಿವಕುಮಾರ್
ಆಸ್ಪತ್ರೆಯ ಆಡಳಿತಾತ್ಮಕ ಕಾರ್ಯವೈಖರಿ ಪರಿಶೀಲಿಸಿದ ಡಿ.ಕೆ. ಶಿವಕುಮಾರ್

ಆಸ್ಪತ್ರೆಯ ಸ್ವಚ್ಛತೆ, ಮೂಲಸೌಕರ್ಯ ಮತ್ತು ತುರ್ತು ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, “ಜನರಿಗೆ ಉತ್ತಮ ಆರೋಗ್ಯ ಸೇವೆ ತಲುಪಬೇಕು” ಎಂಬ ಸಂದೇಶವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಡಿಕೆಶಿ ತಾವೂ ಬಿಪಿ ಮತ್ತು ಶುಗರ್ ಪರೀಕ್ಷೆ ಮಾಡಿಸಿಕೊಂಡು, ಆಸ್ಪತ್ರೆಯ ಸೇವೆಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದರು. ನಾಯಕತ್ವದ ಜವಾಬ್ದಾರಿಗಳ ನಡುವೆ ಜನಸಾಮಾನ್ಯರ ಆರೋಗ್ಯದ ಬಗ್ಗೆ ತೋರಿದ ಕಾಳಜಿ, ಭಕ್ತರ ಮನದಲ್ಲಿ ಭರವಸೆ ಮೂಡಿಸಿತು.

ಆಸ್ಪತ್ರೆಯ ಸಿಬ್ಬಂದಿ, “ನಮ್ಮ ಸೇವೆಗಳನ್ನು ಸ್ವತಃ ಪರಿಶೀಲಿಸಿರುವುದು ನಮಗೆ ಪ್ರೇರಣೆ” ಎಂದು ಅಭಿಪ್ರಾಯಪಟ್ಟರು. ಸ್ಥಳೀಯರು ಕೂಡಾ, “ನಾಯಕರು ನೇರವಾಗಿ ಭೇಟಿ ನೀಡಿ ಪರಿಶೀಲಿಸುವುದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಲುವು” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ದಿಢೀರ್ ಭೇಟಿ, ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದ್ದು, ಜನರಲ್ಲಿ ವಿಶ್ವಾಸ ಮತ್ತು ನೆಮ್ಮದಿ ಮೂಡಿಸಿದೆ. 

Latest News