ರಾಜ್ಯದ ಬಹುತೇಕ ಭಾಗಗಳಲ್ಲಿ ಶೀತಗಾಳಿ ಮತ್ತು ಒಣಹವೆ ಜನರನ್ನು ತತ್ತರಿಸುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಹಲವು ದಿನಗಳವರೆಗೂ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಚಳಿ ವಾತಾವರಣ ಮುಂದುವರಿಯಲಿದೆ. ಹೌದು ಜನವರಿ 23ರ ಬೆಳಿಗ್ಗೆ ಬೆಂಗಳೂರಿನಲ್ಲಿ ದಟ್ಟ ಮಂಜು ಆವರಿಸಿದ್ದು, ಭಾರೀ ಚಳಿಗಾಳಿ ಜನರನ್ನು ಕಂಗೊಳಿಸಿದೆ. ಹವಾಮಾನ ಇಲಾಖೆ ತಿಳಿಸಿರುವಂತೆ, ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು ಬೆಳಿಗ್ಗೆ ಮತ್ತು ರಾತ್ರಿ ವೇಳೆ ತೀವ್ರ ಚಳಿ ಹೆಚ್ಚಾಗಿದ್ದು, ಜನರು ಬಟ್ಟೆಗಳಲ್ಲಿ ಸುತ್ತಿಕೊಂಡು ತಮ್ಮ ದಿನನಿತ್ಯದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಶೀತಗಾಳಿ ಮತ್ತು ಒಣಹವೆ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ತೀವ್ರ ಚಳಿ ಜನರನ್ನು ತತ್ತರಿಸುತ್ತಿದೆ. ಬೆಳಿಗ್ಗೆ ಮತ್ತು ರಾತ್ರಿ ವೇಳೆ ಶೀತಗಾಳಿ ಹೆಚ್ಚಾಗಿದ್ದು, ಮಧ್ಯಾಹ್ನದ ವೇಳೆಗೆ ಬಿರುಬಿಸಿಲು ತಟ್ಟುತ್ತಿದೆ. ಈ ತೀವ್ರ ಹವಾಮಾನ ಬದಲಾವಣೆ ಜನರ ದೈನಂದಿನ ಜೀವನಕ್ಕೆ ಅಡ್ಡಿ ಉಂಟುಮಾಡುತ್ತಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲೂ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಚಳಿ ಜೊತೆಗೆ ಒಣಹವೆ ಜನರನ್ನು ಕಾಡುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಈ ಸ್ಥಿತಿ ಇನ್ನೂ ಕೆಲವು ದಿನಗಳವರೆಗೆ ಮುಂದುವರಿಯಲಿದೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಜನರು ಚಳಿಗಾಳಿಗೆ ತತ್ತರಿಸಿ ಹೋಗಿದ್ದಾರೆ. ಬೀದರ್, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ತೀವ್ರ ಶೀತಗಾಳಿ ವಾತಾವರಣ ನಿರ್ಮಾಣವಾಗುತ್ತಿದೆ. ಜನರು ಬೆಚ್ಚಗಿನ ಬಟ್ಟೆಗಳನ್ನು ಧರಿಸಿ, ಹೀಟರ್ ಮತ್ತು ಬೆಂಕಿಯ ಸಹಾಯದಿಂದ ಚಳಿಯನ್ನು ಎದುರಿಸುತ್ತಿದ್ದಾರೆ.
ಮಧ್ಯಾಹ್ನದ ವೇಳೆಗೆ ಬಿರುಬಿಸಿಲು ತಟ್ಟಿದರೂ, ಬೆಳಿಗ್ಗೆ ಮತ್ತು ರಾತ್ರಿ ವೇಳೆ ಚಳಿ ತೀವ್ರವಾಗಿರುವುದರಿಂದ ಜನರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುತ್ತಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಕೆಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದಿದ್ದಾರೆ. ಈ ಚಳಿ ವಾತಾವರಣವು ಜನರ ಜೀವನಶೈಲಿಯಲ್ಲಿ ಬದಲಾವಣೆ ತಂದಿದ್ದು, ಶಾಲಾ ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರೂ ತೀವ್ರ ಚಳಿಯನ್ನು ಎದುರಿಸುತ್ತಿದ್ದಾರೆ. ಹವಾಮಾನ ಇಲಾಖೆಯ ಎಚ್ಚರಿಕೆ ಜನರಿಗೆ ಮುನ್ನೆಚ್ಚರಿಕೆಯ ಸಂದೇಶ ನೀಡುತ್ತಿದ್ದು, ಚಳಿಗಾಳಿಗೆ ತಕ್ಕ ರೀತಿಯಲ್ಲಿ ತಯಾರಿ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.